ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ

Update: 2020-10-31 13:47 GMT
File Photo

ಬೆಂಗಳೂರು, ಅ.31: ನಾನು ಮುಖ್ಯಮಂತ್ರಿ ಆಗಿದ್ದಾಗ ಕೈಗಾರಿಕೆಗೆ ಒತ್ತು ನೀಡಿದ್ದೆ. ಕಾಂಪೀಟ್ ವಿತ್ ಚೀನಾ ಯೋಜನೆ ಜಾರಿ ಮಾಡಿದ್ದೆ. ಇದೀಗ ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಶನಿವಾರ ನಗರದ ಪೀಣ್ಯದ ಕೈಗಾರಿಕೆ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಆರ್.ಆರ್.ನಗರ ಕ್ಷೇತ್ರದಲ್ಲಿ ನಮ್ಮ ಪಕ್ಷದ ಪರವಾಗಿ ಪ್ರಾಮಾಣಿಕ ಅಭ್ಯರ್ಥಿಯನ್ನು ನಿಲ್ಲಿಸಿದ್ದೇವೆ ಎಂದರು.

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯೇ ಲೂಟಿ ಹೊಡೆಯುವವರನ್ನು ಆಯ್ಕೆ ಮಾಡಬೇಡಿ ಎಂದು ಹೇಳಿದ್ದಾರೆ. ಮೋದಿಯ ಮಾತು ರಾಜ್ಯದಲ್ಲಿ ಪಾಲಿಸಬೇಕು. ಹಾಗಾಗಿ ಲೂಟಿ ಮಾಡಿದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News