ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಕಿಸಾನ್ ಅಧಿಕಾರ್ ದಿವಸ್ ಆಚರಣೆ

Update: 2020-10-31 13:56 GMT

ಉಡುಪಿ, ಅ.31:ಭಾರತವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸರ್ವತಂತ್ರ ಸ್ವತಂತ್ರದ ಏಕಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣ ವಾಗುವುದಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ. ಅದೇ ರೀತಿ ಹಿಂದುಳಿದ ವರ್ಗದ ಜನತೆಗೆ ಆರ್ಥಿಕ ಸ್ವಾತಂತ್ರ ವನ್ನು ಕೊಟ್ಟ ಧೀಮಂತ ಮಹಿಳೆಯಾಗಿ ದೇಶ ಎಂದೂ ಮರೆಯದ ವ್ಯಕ್ತಿತ್ವ ಹೊಂದಿದ ಇಂದಿರಾ ಗಾಂಧಿ ಅವರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಹೇಳಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಸರ್ದಾರ್ ವಲ್ಲಭಭಾಯಿ ಪಾಟೇಲ್ ಜನ್ಮದಿನಾಚರಣೆ ಹಾಗೂ ಇಂದಿರಾ ಗಾಂಧಿ ಪುಣ್ಯ ಸ್ಮರಣೆಯೊಂದಿಗೆ ಹಮ್ಮಿಕೊಳ್ಳಲಾದ ‘ಕಿಸಾನ್ ಅಧಿಕಾರ್ ದಿವಸ’ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ’ಕಿಸಾನ್ ಅಧಿಕಾರ್ ದಿವಸ್’ ಆಚರಣೆಯೊಂದಿಗೆ ಮುಂದಿನ ದಿನದಲ್ಲಿ ರೈತ ವಿರೋಧಿ ನೀತಿಯ ವಿರುದ್ಧ ಬ್ರಹತ್ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡವೂರು ತಿಳಿಸಿದು.

ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮಾತನಾಡಿ,ದೇಶದ ಐಕ್ಯತೆ, ಭದ್ರತೆ ಹಾಗೂ ಸಮಗ್ರತೆಗೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ. ಸ್ವಾತಂತ್ರ ಚಳುವಳಿಯಲ್ಲಿ ಬ್ರಿಟಿಷರ ದಬ್ಬಾಳಿಕೆಯವಿರುದ್ಧ ಗಾಂಧೀಜಿಗೆ ಬೆನ್ನೆಲುಬಾಗಿ ನಿಂತು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರು ವಹಿಸಿದ ಪ್ರಮುಖ ಪಾತ್ರ ಹಾಗೂ ರಾಷ್ಟ್ರದ ಏಕತೆಗೆ ಅವರಿಗಿದ್ದ ಬಲವಾದ ಬದ್ದತೆ, ದೇಶ ಎಂದೂ ಮರೆಯದ ವ್ಯಕ್ತಿತ್ವವಾಗಿದೆ ಎಂದರು.

ಅದೇ ರೀತಿ 15 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಕ್ರಾಂತಿಕಾರಿಕ ಯೋಜನೆಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ ರಾದ ದಿ. ಇಂದಿರಾ ಗಾಂಧಿ ಅವರ ಪುಣ್ಯತಿಥಿಯಾದ ಇಂದು ಅವರನ್ನು ದೇಶ ನೆನಪಿಸಿ ಕೊಳ್ಳಬೇಕಾಗಿದೆ. ಬಡತನ ನಿರ್ಮೂಲನ ಹಾಗೂ ಸ್ವಾವಂಬನೆಯ ಬದುಕಿಗಾಗಿ, ಪಡಿತರ, ಮಾಸಾಶನ ಹಾಗೂ ಭೂಮಸೂದೆಯಂತಹ ಕ್ರಾಂತಿಕಾರಕ ಯೋಜನೆ ಗಳ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾವಲಂಬನೆ ಬದುಕನ್ನು ಹೊಂದುವಂತೆ ಮಾಡಿದರು ಎಂದರು.

ಕುಂದಾಪುರ ಕಿಸಾನ್ ಘಟಕದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಕುಂದಾಪುರ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಮಾಜಿ ಜಿಪಂ ಅಧ್ಯಕ್ಷ ಭುಜಂಗ ಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಬಿ.ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹಬೀಬ್ ಆಲಿ, ರಮೇಶ್ ಕಾಂಚನ್, ರೋಶನಿ ಒಲಿವರ್, ಜ್ಯೋತಿ ಹೆಬ್ಬಾರ್, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ವಿಶ್ವಾಸ್ ಅಮೀನ್, ಸೌರಭ್ ಬಲ್ಲಾಳ್, ಲೂಯಿಸ್ ಲೋಬೋ, ಜಯ ಪೂಜಾರಿ, ಹರೀಶ್ ಶೆಟ್ಟಿ ಪಾಂಗಳ, ಶಶಿಧರ ಶೆಟ್ಟಿ ಎಲ್ಲೂರು, ಯತೀಶ್ ಕರ್ಕೇರಾ, ಉಪೇಂದ್ರ ಮೆಂಡನ್, ಕೇಶವ ಕೋಟ್ಯಾನ್, ನಾಗಪ್ಪ ಕೊಟ್ಟಾರಿ ವಂಡ್ಸೆ, ಜಯ ಶೆಟ್ಟಿ ಬನ್ನಂಜೆ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವೈ. ಸುಕುಮಾರ್ ವಂದಿಸಿ ಅಣ್ಯಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News