ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2020-10-31 14:02 GMT

ಮಂಗಳೂರು, ಅ.31: ಕೇಂದ್ರ ಸರಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಸಂಬಂಧಿಸಿದ ಕಾಯ್ದೆಗಳ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಪಕ್ಷ ರೈತರಿಗೆ ಭೂಮಿ ಕೊಡುವ ಕೆಲಸ ಮಾಡಿದೆ, ಬಿಜೆಪಿ ಸರಕಾರ ಭೂಮಿ ಕಸಿಯುವ ಕೆಲಸ ಮಾಡುತ್ತಿದೆ. ರೈತನ ಬದುಕನ್ನು ಕೇಂದ್ರ ಸರಕಾರ ಕೆಲವು ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದುಸ್ಥಿತಿಗೆ ತರಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸದಾಶಿವ್ ಉಳ್ಳಾಲ್, ಶೈಲಜಾ ಅಮರನಾಥ್, ಶಾಲೆಟ್ ಪಿಂಟೊ, ಮೋಹನ್ ಗೌಡ, ಶಶಿಧರ್ ಹೆಗ್ಡೆ, ಸುರೇಶ್ ಶೆಟ್ಟಿ, ಶುಭೋಧಯ ಆಳ್ವ ಮಾತನಾಡಿದರು.

ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಜಿಪಂ ಸದಸ್ಯ ಶಾಹುಲ್ ಹಮೀದ್, ಎನ್ ಎಸ್‌ಐಯು ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಪದ್ಮನಾಭ ನರಿಂಗಾನ, ನೀರಜ್ ಚಂದ್ರ ಪಾಲ್, ಪ್ರತಿಭಾ ಕುಳಾಯಿ, ಅಬ್ದುಲ್ ಲತೀಫ್, ನವೀನ್ ಡಿಸೋಜ, ಸದಾಶಿವ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ವಿಶ್ವಾಸ್ ದಾಸ್, ತೆರೆಝಾ ಪಿಂಟೊ, ಪದ್ಮನಾಭ ಅಮೀನ್, ಶೋಭಾ ಕೇಶವ್, ಟಿ.ಕೆ. ಸುಧೀರ್, ಜಯಶೀಲ ಅಡ್ಯಂತಾಯ, ಅನಿಲ್‌ಕುಮಾರ್ ಪಂಜಿಮೊಗರು, ಪ್ರಕಾಶ್ ಸಾಲಿಯಾನ್, ಸುಹೈಲ್ ಕಂದಕ್, ಲಾರೆನ್ಸ್ ಡಿಸೋಜ, ಮುದಸ್ಸೀರ್ ಕುದ್ರೋಳಿ, ಮುಹಮ್ಮದ್ ಕುಂಜತ್ತಬೈಲ್, ರಮಾನಂದ ಪೂಜಾರಿ, ಲ್ಯಾನ್ಸಿ ಪಿಂಟೊ, ಜೆಸಿಂತಾ ವಿಜಯ್ ಆಲ್ಫ್ರೆಡ್, ಅಖಿಲ ಆಳ್ವ, ಶಬ್ಬೀರ್ ಸಿದ್ದಕಟ್ಟೆ, ಸಿ.ಎಂ. ಮುಸ್ತಫಾ, ಉದಯ ಕುಂದರ್, ಅನ್ಸರ್ ಸಾಲಿಮಾರ್, ನಮೀತಾ ಡಿ.ರಾವ್, ಭರತೇಶ್ ಅಮೀನ್, ಲಕ್ಷ್ಮೀ ನಾಯರ್, ಯೋಗೀಶ್ ನಾಯಕ್, ಸಬಿತಾ ಮಿಸ್ಕಿತ್, ಸುಧಾಕರ್, ರಘುರಾಜ್ ಕದ್ರಿ, ಪ್ರತೀಬ್ ಬೇಕಲ್, ಯೂಸುಫ್‌ಉಚ್ಚಿಲ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News