ಆರ್‌ಆರ್ ನಗರ ಉಪಚುನಾವಣೆ: ಅಹಿತಕರ ಘಟನೆ ನಡೆಯದಂತೆ ಕ್ರಮ- ಕಮಲ್ ಪಂತ್

Update: 2020-10-31 14:14 GMT

ಬೆಂಗಳೂರು, ಅ.31: ಆರ್‌ಆರ್ ನಗರ ಉಪ ಚುನಾವಣೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿವರೆಗೂ ಬಹಿರಂಗ ಪ್ರಚಾರ ಶಾಂತಿಯುತವಾಗಿ ನಡೆದಿದ್ದು, ಅಹಿತಕರ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ನುಡಿದರು.

ನ.3ರಂದು ನಡೆಯುವ ಮತದಾನ ಶಾಂತಿಯುತವಾಗಿ ನಡೆಯಲು ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಚುನಾವಣಾ ಆಯೋಗದ ಸೂಚನೆಯಂತೆ ಪ್ರಚಾರ ಕಾರ್ಯದಲ್ಲಿ ಕೊರೋನ ಮಾರ್ಗಸೂಚಿಗಳಿಗೆ ತೂರಿದ ಹಿನ್ನೆಲೆ ಈವರೆಗೂ ಐದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News