ನಿರ್ಮಾಪಕ ದಿನೇಶ್‍ ಗಾಂಧಿ ನಿಧನ

Update: 2020-10-31 14:49 GMT

ಬೆಂಗಳೂರು, ಅ.31: ಸಿನಿಮಾ ನಿರ್ಮಾಪಕ, ನಿರ್ದೇಶಕ ದಿನೇಶ್‍ ಗಾಂಧಿ(52) ಹೃದಯಾಘಾತದಿಂದ ಇಂದು(ಶನಿವಾರ) ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು, ಸುದೀಪ್ ಅಭಿನಯದ ವೀರ ಮದಕರಿ, ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ ಚಿತ್ರಗಳಿಗೆ ನಿರ್ಮಾಪಕರಾಗಿದ್ದರು. ಹಾಗೂ ಛತ್ರಪತಿ ಸಿನೆಮಾವನ್ನು ನಿರ್ದೇಶನ ಮಾಡಿದ್ದರು.

ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ನಟ, ನಟಿಯರು, ತಂತ್ರಜ್ಞರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News