2017 , 2018 ಮತ್ತು 2019ನೇ ಸಾಲಿನ ಏಕಲವ್ಯ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರಕಟ

Update: 2020-11-01 05:59 GMT
ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು, ನ.1: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಪ್ರವಾಸೋದ್ಯಮ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಚಿವ ಸಿ.ಟಿ.ರವಿ 2017 , 2018 ಮತ್ತು 2019ನೇ ಸಾಲಿನ ಏಕಲವ್ಯ ಜೀವವವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್.ಎಸ್.ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದರು.

2017ನೇ ಸಾಲಿನ ಏಕಲವ್ಯ ಪ್ರಶಸ್ತಿ ಪುರಸ್ಕೃತರು

ರೀನಾ ಜಾರ್ಜ್ ಎಸ್. (ಆಥ್ಲೆಟಿಕ್), ಮಿಥುಲಾ (ಬ್ಯಾಡ್ಮಿಂಟನ್), ಅವಿನಾಶ ಮಣಿ (ಈಜು), ಅರ್ಜುನ್ ಹಲ್ಕುರ್ಕಿ(ಕುಸ್ತಿ), ಅನಿಲ್ ಕುಮಾರ್ ಬಿ.ಕೆ (ಬಾಸ್ಕೆಟ್‌ಬಾಲ್), ಉಷಾರಾಣಿ ಎನ್. (ಕಬ್ಬಡಿ), ಖುಷಿ ವಿ.(ಟೇಬಲ್ ಟೆನ್ನಿಸ್), ಎಂ.ಎಸ್.ಪೊನ್ನಮ್ಮ (ಹಾಕಿ), ವಿನಾಯಕ್ ರೋಖಡೆ(ವಾಲಿಬಾಲ್), ಎಂ.ದೀಪಾ (ರೋಯಿಂಗ್), ರಾಜು ಅಡಿವೆಪ್ಪಾ ಭಾಟಿ (ಸೈಕ್ಲಿಂಗ್), ವರ್ಷಾ ಎನ್.(ಬಿಲಿಯರ್ಡ್ಸ್, ಸ್ನೂಕರ್), ತೇಜಸ್ ಕೆ. (ಶೂಟಿಂಗ್), ಶೇಖರ್ವೀರಾಸ್ವಾಮಿ( ಟೆನ್ನಿಸ್, ಪ್ಯಾರಾ)

2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ

ಎಂ.ಫ್ರೆಡ್ರಿಕ್ಸ್ (ಹಾಕಿ), ಡಾ.ಪಟೇಲ್ ಮುಹಮದ್ ಇಲ್ಯಾಸ್(ವಾಲಿಬಾಲ್)

2017ನೇ ಸಾಲಿನ ಕ್ರೀಡಾರತ್ನ ಪ್ರಶಸ್ತಿ

ವೀಣಾ ಎಂ.(ಖೋ ಖೋ), ಕೌಶಲ್ಯ ಕೆ.ಎಸ್. ( ಕಬ್ಬಡ್ಡಿ ), ಜಯಲಕ್ಷ್ಮಿ ಜಿ. (ಬಾಲ್ ಬ್ಯಾಡ್ಮಿಂಟನ್), ಅನುಶ್ರೀ ಎಚ್.ಎಸ್. (ಕುಸ್ತಿ), ರಂಜಿತಾ ಎಂ. (ಥ್ರೋ ಬಾಲ್), ಭಿಮ್ಮಪ್ಪ ಹಡಪದ (ಮಲ್ಲಕಂಬ), ಮಹೇಶ ಆರ್. ಎರೆಮನೆ (ಆಟ್ಯಾಪಾಟ್ಯಾ), ಚಂದ್ರಶೇಖರ ಎಚ್.ಕಲ್ಲಹೊಲದ (ಗುಂಡು ಎತ್ತುವುದು), ಗೋಪಾಲ ಕೃಷ್ಣ ಪ್ರಭು, (ಕಂಬಳ), ಶ್ರೀನಿವಾಸ್ ಗೌಡ(ಕಂಬಳ), ಮಣಿಕಂದನ್ (ಪ್ಯಾರಾಕ್ಲೈಂಬಿಂಗ್)

2018ನೇ ಸಾಲಿನ ಏಕಲವ್ಯ ಪ್ರಶಸ್ತಿ

ವಿಜಯಕುಮಾರಿ ಜಿ.ಕೆ.(ಅಥ್ಲೆಟಿಕ್), ಬಾಂಧವ್ಯ ಎಚ್.ಎಂ. (ಬ್ಯಾಸ್ಕೆಟ್ ಬಾಲ್), ಕೆ.ಎಲ್.ರಾಹುಲ್ (ಕ್ರಿಕೆಟ್), ಮೃಘಾ ಗೂಗಾಡ್ (ಸೈಕ್ಲಿಂಗ್), ಫೌವಾದ್ ಮಿರ್ಝಾ (ಈಕ್ವೆಸ್ಟ್ರಿಯನ್) ನಿಕ್ಕಿನ್ ತಿಮ್ಮಯ್ಯ( ಹಾಕಿ), ಗೀತಾ ದಾನಪ್ಪ ಗೊಳ್(ಜುಡೋ), ಶ್ರೀಹರಿ ನಟರಾಜ(ಈಜು), ಸಕೀನ ಖಾತೂನ್ (ಪ್ಯಾರಾ ಪವರ್ ಲಿಫ್ಟಿಂಗ್).

2018ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ

ಸಿ.ಎಂ.ಕುರುಂಬಯ್ಯ (ಹಾಕಿ), ಮಂಜುನಾಥ್ ಆರ್.(ಕಬಡ್ಡಿ),

2018ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿ

ಸಂಪತ್ ನಾಗಪ್ಪ ಯರಗಟ್ಟಿ(ಅಟ್ಯಾ_ಪಟ್ಯಾ), ಸುರೇಶ್ ಶೆಟ್ಟಿ (ಕಂಬಳ), ಶಿವಕುಮಾರ್ ಎಚ್.ಎನ್ ( ಖೋ ಖೋ), ಕಿರಣ್ ಕುಮಾರ್ ಐ. (ಟೆನ್ನಿ ಕ್ವಾಯಿಟ್), ಮಲ್ಲಪ್ಪ ಗೌಡ ಪಾಟೀಲ್(ಕುಸ್ತಿ), ಯಮನಪ್ಪ ಮಾಯಪ್ಪ ಕಲ್ಲೋಳಿ ( ಮಲ್ಲಕಂಬ), ಲಾವಣ್ಯಾ ಬಿ.ಡಿ.( ಬಾಲ್ ಬ್ಯಾಟ್ಮಿಂಟನ್)

2019ನೇ ಏಕಲವ್ಯ ಪ್ರಶಸ್ತಿ

ಅಭಿನಯಾ ಶೆಟ್ಟಿ (ಅಥ್ಲೆಟಿಕ್), ವೇದಾ ಕೃಷ್ಣ ಮೂರ್ತಿ( ಕ್ರಿಕೆಟ್), ವೆಂಕಪ್ಪ ಗೆಂಗಲಗುತ್ತಿ( ಸೈಕ್ಲಿಂಗ್), ಪುಲಿಂದ ಲೋಕೇಶ್ ತಿಮ್ಮಣ್ಣ(ಹಾಕಿ), ಖುಷಿ ದಿನೇಶ್( ಈಜು), ಮಯಾಂಕ್ ಅಗರ್ವಾಲ್ (ಕ್ರಿಕೆಟ್), ಪುನೀತ್  ನಂದಕುಮಾರ್( ಪ್ಯಾರಾ ಈಜು), ಅಭಿಷೇಕ್ ಎನ್. ಶೆಟ್ಟಿ(ಅಥ್ಲೆಟಿಕ್)

2019ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ

ಶಾಂತಾ ರಂಗಸ್ವಾಮಿ (ಕ್ರಿಕೆಟ್), ಸಂಜೀವ್ ಆರ್ ಕನಕ( ಖೊ ಖೋ)

2019ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ

ಅನಿತಾ ಬಿಚಗಟ್ಟಿ( ಅಟ್ಯಾ-ಪಟ್ಯಾ), ಪಲ್ಲವಿ ಎಸ್.ಕೆ.( ಬಾಲ್ ಬ್ಯಾಡ್ಮಿಂಟನ್) ರಕ್ಷಿತಾ ಎಸ್. ( ಕಬಡ್ಡಿ) ಸುದರ್ಶನ್(ಖೋ ಖೋ), ಅನುಪಮಾ ಎಚ್. ಕೆರಕಲಮಟ್ಟಿ(ಮಲ್ಲಕಂಬ) ಪ್ರವೀಣ್ ಕೆ. (ಕಂಬಳ) ಮಂಜುನಾಥ್ ಎಚ್.(ಥ್ರೋ ಬಾಲ್), ಸತೀಶ್ ಪಡತಾರೆ (ಕುಸ್ತಿ) ಅನೀಶಾ ಮಣೇಗಾರ್ ( ಟೆನ್ನಿಕ್ವಾಯಿಟ್)

ಕ್ರೀಡಾ ಪೋಷಕ ಪ್ರಶಸ್ತಿಗೆ ಆಯ್ಕೆಯಾದ ಸಂಸ್ಥೆಗಳು

2018_19: ಸ್ವರ್ಣ ಫುಟ್ಬಾಲ್ ಅಭಿವೃದ್ಧಿ ಸಂಸ್ಥೆ, ಮಂಡ್ಯ

ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಹಳಿಯಾಳ

2019 -20: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳೂರು

2020_21: ಸಿದ್ದಗಂಗಾ ಮಠ ಸಂಸ್ಥೆ ತುಮಕೂರು

ಮಾಣಿಕಾ ಪ್ರಭು ಸ್ಪೋರ್ಟ್ಸ್ ಅಕಾಡಮಿ ಮಾಣಿಕ ನಗರ. ಬೀದರ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News