ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: ಹಲವರ ಬಂಧನ

Update: 2020-11-01 07:18 GMT

ಕಲಬುರಗಿ, ನ.1: ನಗರದ ಸರ್ದಾರ್ ವಲ್ಲಭ ಭಾಯ್​ ಪಟೇಲ್ ವೃತ್ತದಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ರವಿವಾರ ಬೆಳಗ್ಗೆ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದರು.

ಈ ವೇಳೆ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.

ರಾಜ್ಯ ಸರಕಾರದಿಂದ ಪದೇ ಪದೇ ಈ ಭಾಗಕ್ಕೆ ಅನ್ಯಾಯವಾಗುತ್ತಿದೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಮುಂದುವರಿಸಲಾಗುತ್ತಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸ್ಥಾನದಿಂದಲೂ ಈ ಭಾಗವನ್ನು ವಂಚಿಸಲಾಗಿದ್ದು, ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅನ್ಯಾಯದ ಮೇಲೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News