ಅನರ್ಹ ಶಾಸಕರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು: ಎಚ್.ವಿಶ್ವನಾಥ್

Update: 2020-11-01 16:08 GMT

ಮೈಸೂರು,ನ.1: ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿದರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಎಂಬ ಸಿದ್ದು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ.

ಅನರ್ಹಗೊಂಡ ಶಾಸಕರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರೆಂದು ತಿಳಿಸಲಿ. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದೆ ಎಂದು ಹೇಳಿದರು.

ಐದು ವರ್ಷ ಆಡಳಿತ ನಡೆಸಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿ 35 ಸಾವಿರ ಅಂತರದಿಂದ ಸೋತು ಬಾದಾಮಿಗೆ ಓಡಿ ಹೋಗಿದ್ದ ಸಿದ್ದು ಯಾವ ನಾಯಿ ಎಂದು ತಿಳಿಸಲಿ. ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಾಡುವುದನ್ನ ಸಿದ್ದರಾಮಯ್ಯ ನಿಲ್ಲಿಸಲಿ ಎಂದು ಟೀಕಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News