ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು
Update: 2020-11-01 16:05 GMT
ಕೋಟ, ನ.1: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬನ್ನೆರಳಕಟ್ಟೆ ಎಂಬಲ್ಲಿ ನ.1ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಬನ್ನೆರಳಕಟ್ಟೆಯ ಶ್ರೀನಿವಾಸ ಕೊಠಾರಿ(65) ಎಂದು ಗುರುತಿಸ ಲಾಗಿದೆ. ಇವರು ಅಂಗಡಿಗೆ ದಿನಸಿ ಸಾಮಾನು ತರಲು ಹೋಗಿದ್ದು, ಅಲ್ಲಿ ರಸ್ತೆ ದಾಟಲು ನಿಂತಿದ್ದಾಗ ಬಿಲ್ಲಾಡಿ ಕಡೆಯಿಂದ ಬಂದ ಬೈಕ್ ಢಿಕ್ಕಿ ಇವರಿಗೆ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು, ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.