ಡಾ. ಬಶೀರ್ ಕಂಬಳಬೆಟ್ಟುಗೆ ಹಾಸನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Update: 2020-11-02 04:30 GMT

ಹಾಸನ :  ಹಾಸನ ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಸಲುವಾಗಿ ಸಮಾಜ ಸೇವೆ  ಹಾಗೂ ಕೊರೋನ  ಖಾಯಿಲೆ ಸಂದರ್ಭ ಮಾಡಿದ ವೈದ್ಯಕೀಯ ಸೇವೆಯನ್ನು ಗುರುತಿಸಿ ಡಾ. ಅಬ್ದುಲ್ ಬಶೀರ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.

ಈ ಪ್ರಶಸ್ತಿಯನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಗೋಪಾಲಯ್ಯ ವಿತರಿಸಿದರು.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕಂಬಳಬೆಟ್ಟು ನಿವಾಸಿಯಾಗಿರುವ ಇವರು ಎಂಬಿಬಿಎಸ್, ಎಂಎಸ್ ಪದವಿ ಮುಗಿಸಿ, ಹಾಸನದಲ್ಲಿ ಕಳೆದ 20 ವರ್ಷದಿಂದ ಕೀಲು ಮೂಳೆ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದು, ಎಲ್ಲಾ ಸೌಲಭ್ಯವುಳ್ಳ ಇವರದೇ ಆದ ಜನಪ್ರಿಯ ಆಸ್ಪತ್ರೆಯನ್ನು ನಡೆಸುತ್ತಿದ್ದಾರೆ.  ಅನೇಕ ಜನಪರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾಮಾಜಿಕ ಸೇವೆಯನ್ನು ಮಾಡುತ್ತಿದ್ದಾರೆ.

ಕಳೆದ ವರ್ಷ ಹಾಸನ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ಪ್ರಶಸ್ತಿ, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವೈದ್ಯ ಶ್ರೇಷ್ಠ ಪ್ರಶಸ್ತಿ, ಅದು ಅಲ್ಲದೇ ಅನೇಕ ಸಂಘ ಸಂಸ್ಥೆಗಳಿಂದ  ಗೌರವ, ಸನ್ಮಾನವನ್ನು ಪಡೆದಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News