ಬೆಂಗಳೂರು: ವಿದ್ಯುತ್ ತಂತಿ ತಗುಲಿ ಓರ್ವ ಸಾವು

Update: 2020-11-02 12:25 GMT

ಬೆಂಗಳೂರು, ನ.2: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ದುರ್ಘಟನೆ ಇಲ್ಲಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಬ್ಯಾಡರಹಳ್ಳಿ ನಿವಾಸಿ ವಿಷ್ಣುಕುಮಾರ್ ಎಂಬುವರು ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. 

ಬ್ಯಾಡರಹಳ್ಳಿಯ ಶ್ರೀವರ್ಧನ್ ಎಂಬುವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೆಟ್ಟಿಲುಗಳಿಗೆ ವೆಲ್ಡಿಂಗ್ ಮಾಡುವಾಗ ಅದರ ಒಂದು ಭಾಗ ಹೊರಬಂದಿದ್ದು, ಬೆಸ್ಕಾಂ ವಿದ್ಯುತ್ ಕಂಬದಲ್ಲಿನ ತಂತಿಗೆ ತಗುಲಿದ್ದು, ಈ ವೇಳೆ ಕೆಲಸ ಮಾಡುತ್ತಿದ್ದ ವಿಷ್ಣುಕುಮಾರ್ ಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ರಾಜನ್‍ಗೆ ಗಂಭೀರ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಕಟ್ಟಡದ ಮಾಲಕರ ವಿರುದ್ಧ ಸೆಕ್ಷನ್ 304 ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News