ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಶೀಘ್ರದಲ್ಲಿ ಜಾರಿ: ಸಚಿವ ಸಿ.ಟಿ ರವಿ

Update: 2020-11-03 11:30 GMT

ಬೆಂಗಳೂರು, ನ.3: ರಾಜ್ಯದಲ್ಲೂ ಶೀಘ್ರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಕರ್ನಾಟಕ ಸರಕಾರ ಕೂಡ ವಿವಾಹದ ಉದ್ದೇಶಕ್ಕಾಗಿ ಮತಾಂತರವನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ.

ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಹಾಳು ಮಾಡುವಾಗ ನಾವು ಮೌನವಾಗಿರುವುದಿಲ್ಲ. ಮತಾಂತರದ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ವಿಧಿಸಬೇಕಾಗಿದೆ ಎಂದು ತಿಳಿಸಿದ್ದಾರೆ..

ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್, ಕೇವಲ ಮದುವೆ ಉದ್ದೇಶಕ್ಕಾಗಿ ಮತಾಂತರ ಆಗುವುದನ್ನು ಒಪ್ಪಲಾಗದು ಎಂದು ತೀರ್ಪು ನೀಡಿತ್ತು. ಅಲ್ಲದೇ ತಮ್ಮ ಮದುವೆ ಬಳಿಕ ಮೂರು ತಿಂಗಳ ರಕ್ಷಣೆ ನೀಡುವಂತೆ ಮನವಿ ಮಾಡಿದ ಜೋಡಿಯೊಂದರ ಅರ್ಜಿಗೆ ಮಧ್ಯಪ್ರವೇಶಿಸಲು ನಿರಾಕರಿಸುತ್ತಾ ಕೋರ್ಟ್ ಈ ತೀರ್ಪು ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News