×
Ad

ಸುರೇಂದ್ರ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

Update: 2020-11-03 20:20 IST
ಪ್ರತೀಕ್ ಕೋಟ್ಯಾನ್, ಜಯೇಶ್

ಬಂಟ್ವಾಳ, ನ.3: ಇಲ್ಲಿನ ಭಂಡಾರಿ ಬೆಟ್ಟುವಿನ ವಸ್ತಿ ಅಪಾರ್ಟ್ ಮೆಂಟ್ ನಲ್ಲಿ ಚಿತ್ರನಟ ಸುರೇಂದ್ರ ಭಂಡಾರಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರತೀಕ್ ಕೋಟ್ಯಾನ್(27) ಮತ್ತು ಮಂಗಳೂರು ತಾಲೂಕಿನ ಬೊಂದೇಲ್ ನ ಕೊಂಚಾಡಿ ನಿವಾಸಿ ಜಯೇಶ್ ಯಾನೆ ಸಚ್ಚು (28) ಬಂಧಿತ ಆರೋಪಿಗಳು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. 
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳ ಬಂಧನ ಆಗಿದೆ. ಪ್ರಕರಣದ ಪ್ರಮುಖ ಆರೋಪಿಗಳಿಗೆ ಹತ್ಯೆಯ ಬಳಿಕ ವಿವಿಧೆಡೆ ತಲೆಮೆರೆಸಿಕೊಳ್ಳಲು ಹಾಗೂ ವಾಹನ ವ್ಯವಸ್ಥೆಯನ್ನು ಮಾಡಿದ ಆರೋಪ ಇವರ ಮೇಲಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯು ಮುಂದುವರಿದಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News