ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಜಾವೇದ್ ಅಖ್ತರ್

Update: 2020-11-03 17:11 GMT

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್  ಸಾವಿನ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ತನ್ನ ವಿರುದ್ದ ಹುರುಳಿಲ್ಲದ  ಆರೋಪಗಳನ್ನು ಮಾಡಿ, ಘನತೆಗೆ ಧಕ್ಕೆ ತಂದಿರುವ ನಟಿ ಕಂಗನಾ ರಾಣಾವತ್ ವಿರುದ್ಧ ಕವಿ ಹಾಗೂ ಸಾಹಿತಿ ಜಾವೇದ್ ಅಖ್ತರ್ ಮಾನನಷ್ಟ ಮೊಕದ್ದಮೆಯನ್ನು ಮುಂಬೈ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಶ್ಚಿಮ ಮುಂಬೈನ ಅಂಧೇರಿಯಲ್ಲಿರುವ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಿರುವ ಮೊಕದ್ದಮೆಯಲ್ಲಿ ಜಾವೇದ್ ಅಖ್ತರ್ ಅವರು ಕಂಗನಾ ರಾಣಾವತ್  ವಿರುದ್ಧ ಮಾನನಷ್ಟಕ್ಕಾಗಿ ಭಾರತೀಯ ದಂಡ ಸಂಹಿತೆಯಡಿ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News