×
Ad

ಬಾವಿಗೆ ಬಿದ್ದು ಮೃತ್ಯು

Update: 2020-11-04 21:21 IST

ಹಿರಿಯಡ್ಕ, ನ.4: ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ನ.3ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಸದಾನಂದ ನಾಯ್ಕ(45) ಎಂದು ಗುರುತಿಸಲಾಗಿದೆ. ಬೆಂಗಳೂರಿ ನಲ್ಲಿ ಹೋಟೇಲ್ ಕೆಲಸ ಮಾಡಿಕೊಂಡಿದ್ದ ಇವರು, ಸುಮಾರು 5 ವರ್ಷಗಳ ಹಿಂದೆ ಊರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದರು. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ತೋಟದ ಬಾವಿಯ ಪಂಪ್ ಚಾಲು ಮಾಡಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸ ಲಾಗಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News