ನ.6: ವಿದ್ಯುತ್ ಸಂಪರ್ಕ ಕಡಿತ
Update: 2020-11-04 21:30 IST
ಮಂಗಳೂರು, ನ.4: ನಗರದ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ ಪಾಂಡೇಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಮತ್ತಿತರ ದುರಸ್ತಿ ಕಾರ್ಯ ನಡೆಯಲಿರುವುದರಿಂದ ನ.6ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ಎ.ಬಿ. ಶೆಟ್ಟಿ ಸರ್ಕಲ್, ಭಾರತೀಯ ವಿದ್ಯಾಭವನ, ಎಸ್ಪಿ ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂರಸ್ತೆ, ಮಹಾಲಿಂಗೇಶ್ವರ ಟೆಂಪಲ್, ಅಮೃತನಗರ, ರೋಸಾರಿಯೋ ಚರ್ಚ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.