ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳು ಸೆರೆ
Update: 2020-11-05 17:03 GMT
ಸುಳ್ಯ: ಕೇರಳ ರಾಜ್ಯದ ರಿಜಿಸ್ಟರ್ ನಂಬರ್ ಹೊಂದಿರುವ ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ಸಾಗಿಸುತ್ತಿರುವ ಮಾಹಿತಿ ಮೇರೆಗೆ ಸುಳ್ಯ ಠಾಣೆ ಉಪನಿರೀಕ್ಷಕರಾದ ಹರೀಶ್ ಎಮ್.ಆರ್ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಿರುವ ಘಟನೆ ಸುಳ್ಯ ಜ್ಯೋತಿ ವೃತ್ತದ ಬಳಿ ನಡೆದಿದೆ.
ಆರೋಪಿಗಳಾದ ಎಂ.ಎ. ಅಬ್ಬಾಸ್ (63), ಅಬ್ದುಲ್ ಕುಂಞಿ(50), ಹಾಗೂ 8 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.