ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾಯಿಸುವ ಸುದ್ದಿ ಬಗ್ಗೆ ಡಿ.ಕೆ.ಸುರೇಶ್ ಪ್ರತಿಕ್ರಿಯೆ

Update: 2020-11-06 12:27 GMT

ಬೆಂಗಳೂರು, ನ.6: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಬದಲಾಯಿಸುವ ಕುರಿತು ಕಾಂಗ್ರೆಸ್‍ನಲ್ಲಿ ಪ್ರಸ್ತಾಪವೇ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕನಸು ಬಿದ್ದಿರಬೇಕೆಂದು ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ರಾಜ್ಯ ನಾಯಕರಾಗಲಿ, ಹೈಕಮಾಂಡ್ ಆಗಲಿ ಸಿದ್ದರಾಮಯ್ಯರನ್ನು ವಿರೋಧ ಪಕ್ಷದ ನಾಯಕ ಸ್ಥಾನದಿಂದ ಬದಲಾಯಿಸುತ್ತೇವೆಂದು ಎಲ್ಲಿಯೂ ಮಾತನಾಡಿಲ್ಲ. ಆದರೂ ಈ ಬಗ್ಗೆ ಬಿ.ಎಸ್.ಯಡಿಯೂರಪ್ಪ ಕನಸು ಬಿದ್ದಂತೆ ಮಾತನಾಡಿದ್ದಾರೆಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ವೀರಶೈವ ಸಮುದಾಯದಲ್ಲಿ ಪ್ರಭಾವಿ ನಾಯಕ. ಅವರಿಗೆ ಸಮಸ್ಯೆ ಉಂಟು ಮಾಡುವುದಕ್ಕಾಗಿಯೇ ಬಂಧಿಸಲಾಗಿದೆ. ಅವರು ಯಾವ ತಪ್ಪು ಮಾಡಿಲ್ಲ. ಆರೋಪ ಮುಕ್ತರಾಗಿ ಹೊರ ಬರುತ್ತಾರೆಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News