ಬೆಂಗಳೂರಿನಲ್ಲಿ ಮಳೆ ಅವಾಂತರ: ಗೋಡೆ ಕುಸಿದು ಕಾರ್ಮಿಕ ಮೃತ್ಯು
Update: 2020-11-06 14:47 GMT
ಬೆಂಗಳೂರು, ನ.6: ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಗೋಡೆ ಕುಸಿದು ಬಿದ್ದು, ಕಾರ್ಮಿಕ ಮೃತಪಟ್ಟಿರುವ ಘಟನೆ ಇಸ್ಕಾನ್ ಬಳಿಯ ಖಾಸಗಿ ಕಾರ್ಖಾನೆಯಲ್ಲಿ ನಡೆದಿದೆ.
ಬಿಹಾರ ಮೂಲದ ಪುರಂ ಪೂಜಾರಿ(19) ಮೃತ ಕಾರ್ಮಿಕ. ಘಟನೆಯಲ್ಲಿ ಕಾರ್ಖಾನೆಯ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸುಮಾರು 20 ಮಿ.ಮಿಗೂ ಹೆಚ್ಚು ಮಳೆಯಾಗಿದೆ, ಆದರೆ ನಗರದಲ್ಲಿ ಯಾವುದೇ ಪ್ರವಾಹ ಮತ್ತು ಹಾನಿಯ ವರದಿಯಾಗಗಿಲ್ಲ ಎಂದು ಬಿಬಿಎಂಪಿ ಕಂಟ್ರೋಲ್ ರೂಮ್ ಅಧಿಕಾರಿಗಳು ತಿಳಿಸಿದ್ದಾರೆ.