ಸೂಕ್ತ ಸ್ಥಾನಮಾನದ ಭರವಸೆ: ರಾಜೀನಾಮೆ ಹಿಂಪಡೆದ ಎಡಿಜಿಪಿ ರವೀಂದ್ರನಾಥ್
Update: 2020-11-07 13:02 GMT
ಬೆಂಗಳೂರು, ನ.7: ಸೇವಾ ಹಿರಿತನ ಆಧಾರದ ಮೇಲೆ ಭಡ್ತಿ ನೀಡಿಲ್ಲವೆಂದು ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದ ಎಡಿಜಿಪಿ ರವೀಂದ್ರನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಐಪಿಎಸ್ ಅಧಿಕಾರಿ ರವೀಂದ್ರನಾಥ್ ಅವರು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ ಎನ್ನಲಾಗಿದೆ.
ತಮ್ಮಗಿಂತ ಕಿರಿಯ ಅಧಿಕಾರಿ ಟಿ. ಸುನೀಲ್ ಕುಮಾರ್ ಅವರಿಗೆ ಡಿಜಿಪಿಯಾಗಿ ಭಡ್ತಿ ನೀಡಿದ್ದರಿಂದ ಅರಣ್ಯ ಇಲಾಖೆಯ ಎಡಿಜಿಪಿಯಾಗಿದ್ದ ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿ ಕರ್ತವ್ಯಕ್ಕೆ ರಾಜೀನಾಮೆ ನೀಡಿ ರಾಜ್ಯ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಪತ್ರ ವರ್ಗಾಯಿಸಿದ್ದರು.