ಬಿಜೆಪಿಯಲ್ಲಿ ಮೂರು ಗುಂಪುಗಳಿವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Update: 2020-11-07 14:07 GMT

ಬೆಳಗಾವಿ, ನ.7: ಬಿಜೆಪಿ ಪಕ್ಷದಲ್ಲಿ ಮೂರು ಗುಂಪುಗಳಿವೆ. ಒಂದು ದೆಹಲಿಯಲ್ಲಿದ್ದರೆ ಎರಡು ಕರ್ನಾಟಕದಲ್ಲಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ, ಅದೇನು ಹೊಸದಲ್ಲ. ಪ್ರತಿಯೊಬ್ಬರೂ ತಮ್ಮ ನಾಯಕತ್ವದಲ್ಲಿಯೇ ಇರುತ್ತಾರೆ. ಆದರೆ ಪಕ್ಷ ಅಂತ ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ ಎಂದಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಶಿರಾ ಕ್ಷೇತ್ರದಲ್ಲಂತೂ ಗೆಲುವು ಖಚಿತ ಎಂದು ವಿಶ್ವಾಸವಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News