ವಿನಯ್‍ ಕುಲಕರ್ಣಿ ಬಂಧನ ಷಡ್ಯಂತರ: ಮಾಜಿ ಸಚಿವ ಎಚ್.ಕೆ.ಪಾಟೀಲ್

Update: 2020-11-08 13:00 GMT

ಬೆಂಗಳೂರು, ನ. 8: ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವ ಕ್ರಮ ಒಂದು ಷಡ್ಯಂತರ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ

ರವಿವಾರ ಈ ಕುರಿತು ಟ್ವೀಟ್ ಮಾಡಿರುವ ಪಾಟೀಲ್, ತನಿಖಾ ಸಂಸ್ಥೆಗಳನ್ನು ಬಳಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸರಿಯಾದ ನಡೆ ಅಲ್ಲ. ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿ ತನ್ನ ಕೈಗೊಂಬೆಯನ್ನಾಗಿಸಿ ಕಾಂಗ್ರೆಸ್ ನಾಯಕರನ್ನು ಬೆದರಿಸುವ ತಂತ್ರ ರೂಪಿಸುತ್ತಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ಕ್ರಮವಾಗಿದ್ದು, ಖಂಡನೀಯವಾದದ್ದು ಎಂದು ಎಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News