ಉಮಾಶ್ರೀ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2020-11-08 15:43 GMT

ಬಾಗಲಕೋಟೆ, ನ. 8: ಹಿರಿಯ ಸಿನಿಮಾ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಆರೋಪಿಗಳನ್ನು ಇಲ್ಲಿನ ತೇರದಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜಮಖಂಡಿಯ ಯಲ್ಲಪ್ಪ ಗಡ್ಡಿ ಹಾಗೂ ಹಾಗೂ ಮುಧೋಳದ ದುರ್ಗಪ್ಪ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ನ.2ರಂದು ನಗರದ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಅವರ ನಿವಾಸಕ್ಕೆ ದುಷ್ಕರ್ಮಿಗಳು ನುಗ್ಗಿ ನಗದು ಸಹಿತ ಹಲವು ವಸ್ತುಗಳನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಗೆ ಉಮಾಶ್ರೀ ದೂರು ಕೊಟ್ಟಿದ್ದರು.

ದೂರಿನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಂಧಿತರಿಂದ 1.94 ಲಕ್ಷ ರೂ. ಜಪ್ತಿ ಮಾಡಿದ್ದು, ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News