ಹಿರಿಯ ಶಿಲ್ಪಿ ಆರ್.ವೀರಭದ್ರಚಾರ್ ನಿಧನ

Update: 2020-11-08 16:32 GMT

ಬೆಂಗಳೂರು, ನ. 8: ಜಕಣಚಾರಿ ಪ್ರಶಸ್ತಿ ಪುರಸ್ಕೃತ ಹಿರಿಯ ಶಿಲ್ಪಿ ಆರ್.ವೀರಭದ್ರಚಾರ್ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

ಲೋಹ ಎರಕದ ಪ್ರತಿಮಾ ಶಿಲ್ಪ ರಚನೆಯಲ್ಲಿ ಅಪಾರ ಸಾಧನೆ ಮಾಡಿದ್ದ ಆರ್.ವೀರಭದ್ರಚಾರ್, ಶಿಲ್ಪಕಲಾ ಕ್ಷೇತ್ರದ ಸಾಧನೆ ಮೆಚ್ಚಿ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಿಂದ 1976ರಲ್ಲಿ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 2008ರಲ್ಲಿ ರಾಜ್ಯ ಸರಕಾರ ಕೊಡಮಾಡುವ ಜೀವಮಾನದ ಶ್ರೇಷ್ಠ ಪ್ರಶಸ್ತಿ ಜಕಣಚಾರಿ ಪ್ರಶಸ್ತಿಗೆ ಭಾಜನರಾಗಿದ್ದರು.

ಇವರ ಜೀವನ ಸಾಧನೆಯನ್ನು ಗೌರವಿಸಿ ರಾಜ್ಯ ಸರಕಾರ 2004ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರ ಮಾರ್ಗದರ್ಶನದಲ್ಲಿ ಅಪಾರ ಶಿಷ್ಯರನ್ನು ತರಬೇತಿ ನೀಡಿ ಬೆಳಸಿ ನಾಡಿನ ಶಿಲ್ಪಕಲಾ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದರು. ಇವರ ಅಗಲಿಕೆ ನಾಡಿನ ಶಿಲ್ಪಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News