ನನ್ನ ತಂದೆಗೆ ರಾಮನಗರ, ನನಗೆ ಮಂಡ್ಯ ಕರ್ಮಭೂಮಿ: ನಿಖಿಲ್ ಕುಮಾರಸ್ವಾಮಿ

Update: 2020-11-08 16:38 GMT

ಮಂಡ್ಯ, ನ.8: ನನ್ನ ತಂದೆ ಕುಮಾರಸ್ವಾಮಿ ಅವರಿಗೆ ರಾಮನಗರ ಕರ್ಮಭೂಮಿಯಾದರೆ, ನನಗೆ ಮಂಡ್ಯ ಕರ್ಮಭೂಮಿ ಎಂದು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಚೌಡೇನಹಳ್ಳಿ ಗ್ರಾಮದ ರೈತ ನಂಜೇಗೌಡ(70) ಅವರ ಮನೆಗೆ ರವಿವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇನೆ ನಿಜ. ಆದರೆ, ಮನೆಯಲ್ಲೇ ಕೂರುವುದಿಲ್ಲ. ಜನರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದೇನೆ. ಮೊದಲ ಆಯ್ಕೆ ಪಕ್ಷ ಸಂಘಟನೆ, ನಂತರದ್ದು ಸಿನಿಮಾ ಆಗಿದೆ ಎಂದು ಅವರು ತಿಳಿಸಿದರು.

ಕೇವಲ ಸಾಂತ್ವನದಿಂದ ರೈತರ ಆತ್ಮಹತ್ಯೆ ನಿಲ್ಲುವುದಿಲ್ಲ. ಜತೆಗೆ ಸರಕಾರಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬೆಳೆಗಳಿಗೆ ವೈಜ್ಞಾನಿಕ ದರ ನೀಡಬೇಕು. ರೈತರು ಆತ್ಮಹತ್ಯೆ ಹಾದಿ ಹಿಡಿಯದಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News