ಪಿಎಸ್ಸೈ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ: ಆರೋಪಿ ವಶಕ್ಕೆ

Update: 2020-11-08 17:10 GMT

ಬೆಂಗಳೂರು, ನ. 8: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಪಿಎಸ್ಸೈ) ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಹಾಡುಹಗಲೇ ಯಶವಂತಪುರದ ಬಳಿ ನಡೆದಿದೆ.

ನಗರದ ಶ್ರೀರಾಂಪುರ ಪೊಲೀಸ್ ಠಾಣೆಯ ತರಬೇತಿ ನಿರತ(ಪ್ರೊಬೇಷನರಿ) ಪಿಎಸ್ಸೈ ಶರ್ಫುದ್ದೀನ್ ಅವರ ಮೇಲೆ ಉದಯ್ ಕುಮಾರ್ ಎಂಬಾತ ಹಲ್ಲೆ ನಡೆಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ರವಿವಾರ ಪಿಎಸ್ಸೈ ಶರ್ಫುದ್ದೀನ್ ಅವರು ಯಶವಂತಪುರದಲ್ಲಿ ಕರ್ತವ್ಯದಲ್ಲಿದ್ದ ಅವರ ಬೈಕ್‍ಗೆ, ಮತ್ತೊಂದು ಸ್ಕೂಟರ್ ನಲ್ಲಿ ಬರುತ್ತಿದ್ದ ಉದಯ್‍ ಕುಮಾರ್ ಢಿಕ್ಕಿ ಹೊಡೆದಿದ್ದಾನೆ. ಈ ಬಗ್ಗೆ ಪಿಎಸ್ಸೈ ಪ್ರಶ್ನಿಸಿದಾಗ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಲ್ಲು ಹಾಗೂ ಮಾರಕಾಸ್ತ್ರಗಳಿಂದ ಗಂಭೀರ ಹಲ್ಲೆ ನಡೆಸಿರುವುದಾಗಿ ಹೇಳಲಾಗುತ್ತಿದೆ.

ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪಿಎಸ್ಸೈ ಶರ್ಫುದ್ದೀನ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಆರೋಪಿ ಉದಯ್ ಕುಮಾರ್ ಅನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News