ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ದುರಂತ: ನದಿಯಲ್ಲಿ ಮುಳುಗಿ ಯುವ ಜೋಡಿ ಮೃತ್ಯು

Update: 2020-11-09 14:43 GMT

ಮೈಸೂರು,ನ.9: ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಿದ್ದ ವೇಳೆ ಯುವ ಜೋಡಿಯೊಂದು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಸೋಮವಾರ ನಡೆದಿದೆ.

ಮೈಸೂರು ಜೆಲ್ಲೆಯ ಕ್ಯಾತಮಾರನಹಳ್ಳಿಯ ಶಶಿಕಲಾ(20) ಮತ್ತು ಚಂದ್ರು (28) ಮೃತಪಟ್ಟ ವಧು-ವರರು. ಇದೇ ತಿಂಗಳು 22ಕ್ಕೆ ಇವರಿಬ್ಬರ ಮದುವೆ ನಿಶ್ಚಯವಾಗಿತ್ತು. 

ಈ ಹಿನ್ನೆಲೆ ತಲಕಾಡಿನ ರೆಸಾರ್ಟ್ ಬಳಿಯಿರುವ ಕಾವೇರಿ ನದಿಯ ಬೋಟ್‍ನಲ್ಲಿ ಪ್ರೀ ವೆಡ್ಡಿಂಗ್ ಫೋಟೊಶೂಟ್ ಮಾಡಿಸುತ್ತಿದ್ದ ವೇಳೆ ಆಯತಪ್ಪಿ ಶಶಿಕಲಾ ಕೆಳಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋಗಿ ಚಂದ್ರು ಕೂಡ ನದಿಗೆ ಬಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News