ಕೊರೋನ ನಿಯಮ ಗಾಳಿಗೆ ತೂರಿ ಬಿಜೆಪಿ ನಾಯಕರ ಸಂಭ್ರಮಾಚರಣೆ: ದೂರು

Update: 2020-11-11 16:20 GMT

ಬೆಂಗಳೂರು, ನ.11: ಚುನಾವಣೆ ಫಲಿತಾಂಶ ದಿನದಂದು ಕೊರೋನ ನಿಯಮ ಗಾಳಿಗೆ ತೂರಿ, ಸಂಭ್ರಮಾಚರಣೆ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಪೊಲೀಸರಿಗೆ ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ದೂರು ಸಲ್ಲಿಕೆ ಮಾಡಿದ್ದಾರೆ.

ಬುಧವಾರ ನಗರದ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಗೆ ದೂರು ಸಲ್ಲಿಸಿರುವ ಅವರು, ಉಪಚುನಾವಣೆಗಳಲ್ಲಿ ಬಿಜೆಪಿ ಗೆದ್ದ ಹಿನ್ನೆಲೆ ಹಲವು ಬಿಜೆಪಿ ನಾಯಕರು ಕೊರೋನ ನಿಯಮಗಳನ್ನು ಉಲ್ಲಂಘಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಹಾಗಾಗಿ, ಈ ಸಂಬಂಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹಲವು ಜನರೊಂದಿಗೆ ಜಮಾವಣೆಗೊಂಡು ಕೋವಿಡ್-19 ನಿಯಮ ಉಲ್ಲಂಘಿಸಿದರೆ, ಶಿರಾ ಕ್ಷೇತ್ರದಲ್ಲಿ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಾಸ್ಕ್ ಧರಿಸದೆ ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ. ಈ ಸಂಬಂಧ ಪೊಲೀಸರು ಮೊಕದ್ದಮೆ ದಾಖಲಿಸಿ, ಕ್ರಮಕ್ಕೆ ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News