ಸಚಿವ ಸ್ಥಾನಕ್ಕಾಗಿ ಲಾಭಿ ಮಾಡಿಲ್ಲ: ಶಾಸಕ ಎಸ್.ಎ.ರಾಮದಾಸ್

Update: 2020-11-11 17:04 GMT

ಮೈಸೂರು,ನ.11: ಸಚಿವ ಸ್ಥಾನಕ್ಕಾಗಿ ನಾನು ಈ ಹಿಂದೆಯೂ ಯಾವುದೇ ಲಾಬಿ ಮಾಡಿಲ್ಲ, ಈಗಲೂ ಮಾಡಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ಸಚಿವ ಸ್ಥಾನ ಕುರಿತು ಬುಧವಾರ ಮಾದ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡುವ ವ್ಯಕ್ತಿ ನಾನಲ್ಲ. ಯಡಿಯೂರಪ್ಪ ನನ್ನ ತಂದೆ ಸ್ಥಾನದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದರು.

 ದೇಶದ ಹಿರಿಯ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ರಾಜ್ಯವನ್ನು ಮುನ್ನಡೆಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವು ಶಾಸಕರಾಗಿ ಕೆಲಸ ಮಾಡುತ್ತಿದ್ದೇವೆ. ನಾನು ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಜನರ ಋಣ ತೀರಿಸಲು ಕೊನೆಯವರೆಗೂ ದುಡಿಯುತ್ತೇನೆ ಎಂದು ತಿಳಿಸಿದರು.

ಸಿಎಂ ಬದಲಾವಣೆ ಆಗಲಿದ್ದಾರೆ ಎಂದಿರುವ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಒಬ್ಬ ವಿರೋಧ ಪಕ್ಷದ ನಾಯಕ, ಆಡಳಿತ ಪಕ್ಷವನ್ನು ಟೀಕಿಸಲೇಬೇಕಾದ ಅನಿವಾರ್ಯತೆ ಅವರಿಗಿದೆ. ಈ ಹಿನ್ನೆಲೆಯಲ್ಲಿ ಆಗಾಗ ಇಂತಹ ವಿಚಾರ ಪ್ರಸ್ತಾಪ ಮಾಡುತ್ತಾರೆ. ಸಿಎಂ ಬದಲಾವಣೆ ವಿಚಾರವಾಗಿ ಆಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಮುಖರು ತೀರ್ಮಾನಿಸುತ್ತಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News