ಮೈಸೂರು: ಮರಕ್ಕೆ ಪೊಲೀಸ್ ಜೀಪ್ ಢಿಕ್ಕಿ ; ಎಎಸ್‌ಐ, ಮುಖ್ಯ ಪೇದೆ ಮೃತ್ಯು

Update: 2020-11-12 06:51 GMT

ಮೈಸೂರು : ಮರಕ್ಕೆ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಪೊಲೀಸರು ಮೃತಪಟ್ಟ ಘಟನೆ ಜಿಲ್ಲೆಯ ಕೆ‌.ಆರ್. ನಗರದಲ್ಲಿ ನಡೆದಿದೆ.

ಕೆ.ಆರ್.ನಗರ ತಾಲ್ಲೂಕಿನ ಸಿದ್ದೇಗೌಡನ ಕೊಪ್ಪಲು ಗ್ರಾಮದ ಬಳಿ ತಡರಾತ್ರಿ 1.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕೆ‌.ಆರ್.ನಗರ ಪೊಲೀಸ್ ಠಾಣೆಯ ಎಎಸ್‌ಐ ಮೂರ್ತಿ ಮತ್ತು ಮುಖ್ಯ ಪೇದೆ ಶಾಂತಕುಮಾರ್ ಮೃತರು ಎಂದು ಗುರುತಿಸಲಾಗಿದೆ.

ಇವರು ಬುಧವಾರ ರಾತ್ರಿ ಸಾಲಿಗ್ರಾಮ, ಬೆಟ್ಟದಪುರ ಮತ್ತು ಚುಂಚನಕಟ್ಟೆಯಲ್ಲಿ ಗಸ್ತು ಪರಿಶೀಲಿಸಿ ವಾಪಸ್ ಕೆ.ಆರ್.ನಗರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ನಿದ್ರೆಗೆ ಜಾರಿ ಅಥವಾ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಕೆ.ಆರ್. ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News