ರಾಜಧಾನಿಯಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ: ವಾಹನ ಸವಾರರ ಪರದಾಟ

Update: 2020-11-13 16:01 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.13: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದ್ದು, ಮಳೆಯಿಂದಾಗಿ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

ನಗರದಲ್ಲಿ ಶುಕ್ರವಾರ ಬೆಳೆಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್‍ಎಎಲ್, ರಾಜಾಜಿನಗರ, ಮಾಗಡಿ ರಸ್ತೆ, ಶ್ರೀನಗರ ಸೇರಿದಂತೆ ನಗರದ ಹಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ.

ಮಳೆಯಿಂದಾಗಿ ಮೆಜೆಸ್ಟಿಕ್, ಶಾಂತಿನಗರ, ಟೌನ್ ಹಾಲ್, ಮೈಸೂರು ರಸ್ತೆ, ವಿಜಯನಗರ, ನಾಯಂಡಳ್ಳಿ, ಯಶವಂತಪುರ, ಬನ್ನೇರುಘಟ್ಟ, ಕೋರಮಂಗಲ, ಮಡಿವಾಳ, ರೇಸ್ ಕೋರ್ಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News