ಕಾರು ಢಿಕ್ಕಿ: ಫೈನಾನ್ಸ್‌ನ ಮ್ಯಾನೇಜರ್ ಮೃತ್ಯು

Update: 2020-11-13 17:06 GMT

ಬೈಂದೂರು, ನ.13: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸಹ ಸವಾರರೊಬ್ಬರು ಮೃತಪಟ್ಟ ಘಟನೆ ನಾವುಂದ ಮಸ್ಕಿ ಗೋಪಾಲಕೃಷ್ಣ ದೇವಸ್ಥಾನದ ಹತ್ತಿರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನ.12ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಎಲ್ಟಿ ಫೈನಾನ್ಸ್‌ನ ಮ್ಯಾನೇಜರ್ ಶಶಿಕುಮಾರ್ ಎನ್. ಎಂದು ಗುರುತಿಸಲಾಗಿದೆ. ಫೈನಾನ್ಸ್ ಉದ್ಯೋಗಿ ಬೈಕ್ ಸವಾರ ಸಂದೀಪ್ (24) ಎಂಬ ವರು ಗಾಯಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇವರಿಬ್ಬರು ಬೈಕಿನಲ್ಲಿ ಫೈನಾನ್ಸ್ ಕಲೆಕ್ಷನ್‌ಗಾಗಿ ಬೈಕಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಶಶಿಕುಮಾರ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News