ಮರಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು, ಸಹಸವಾರ ಗಂಭೀರ ಗಾಯ
Update: 2020-11-14 14:06 GMT
ಬ್ರಹ್ಮಾವರ, ನ.14: ಬೈಕೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹೊಸೂರು ಗ್ರಾಮದ, ಮೇಲ್ಕರ್ಜೆ ಎಂಬಲ್ಲಿ ನ.13ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬೈಕ್ ಸವಾರ ಅಭಿಷೇಕ್(23) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಸಹಸವಾರ ರಂಜಿತ್(26) ಎಂಬವರು ಮಣಿಪಾಲ ಆ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೆಬ್ರಿ ಸಂತೆಕಟ್ಟೆ ಕಡೆಯಿಂದ ಬರುತ್ತಿದ್ದ ಬೈಕ್, ಸವಾರನ ಹತೋಟಿ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಇವರಲ್ಲಿ ಅಭಿಷೇಕ್ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.