ಮೂರು ದಿನ ಮೆಟ್ರೋ ಕಾರ್ಯಾಚರಣೆಯಲ್ಲಿ ವ್ಯತ್ಯಯ

Update: 2020-11-14 16:17 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.14: ಹಸಿರು ಮಾರ್ಗದ ನಮ್ಮ ಮೆಟ್ರೋ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಆರ್.ವಿ ರಸ್ತೆಯಿಂದ ಯಲಚೇನಹಳ್ಳಿಯವರೆಗೆ ಮೂರು ದಿನಗಳ ಕಾಲ ಮೆಟ್ರೋ ಕಾರ್ಯಾಚರಣೆ ಸ್ಥಗಿತಗೊಳ್ಳಲಿದೆ.

2ನೇ ಹಂತದ ಯಲಚೇನಹಳ್ಳಿಯಿಂದ ಅಂಜನಾಪುರದ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ನ. 17ರಿಂದ 19ರವರೆಗೆ ಮೆಟ್ರೋ ಕಾರ್ಯಾಚರಣೆ ಸ್ಥಗಿತವಾಗಲಿದೆ ಎಂದು ಬಿಎಂಆರ್‍ಸಿಎಲ್ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News