×
Ad

ಮಾರಕಾಸ್ತ್ರಗಳಿಂದ ಬೆದರಿಸಿ ವಸೂಲಿ ಆರೋಪ: ಮೂವರ ಬಂಧನ

Update: 2020-11-14 22:52 IST

ಬೆಂಗಳೂರು, ನ.14: ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾರಕಾಸ್ತ್ರಗಳಿಂದ ಬೆದರಿಸಿ ವಸೂಲಿ ಮಾಡುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ವಿಷ್ಣು, ಶಿವಕುಮಾರ್, ಸಂತಮಿಲ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 2.5 ಲಕ್ಷ ಬೆಲೆ ಬಾಳುವ 4 ದ್ವಿಚಕ್ರ ವಾಹನಗಳು, 40 ಮೊಬೈಲ್‍ಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News