ನೆಹರೂ ಅವರಿಗೆ ಗೌರವ ಸಲ್ಲಿಸಿದ ಉಪ ರಾಷ್ಟ್ರಪತಿ

Update: 2020-11-14 17:38 GMT

 ಹೊಸದಿಲ್ಲಿ, ನ. 14: ಭಾರತದ ಮೊದಲ ಪ್ರಧಾನಿ ಜವಾಹರ್‌ಲಾಲ್ ನೆಹರೂ ಅವರಿಗೆ ಶನಿವಾರ ಗೌರವ ಸಲ್ಲಿಸಿದ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಆಧುನಿಕ ಭಾರತ ನಿರ್ಮಾಣಕ್ಕೆ ನೀಡಿದ ಕೊಡುಗೆಗಾಗಿ ಅವರನ್ನು ನಿರಂತರ ಸ್ಮರಿಸಬೇಕು ಎಂದಿದ್ದಾರೆ.

ದೇಶದ ಅಭಿವೃದ್ಧಿಗಾಗಿ ಕೊಡುಗೆ ನೀಡಿದ ಹಾಗೂ ಮಕ್ಕಳನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಜವಾಹರ್‌ಲಾಲ್ ನೆಹರೂ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುವ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿ ಅವರು ಮಕ್ಕಳ ದಿನಾಚರಣೆಗೆ ಕೂಡ ಶುಭಾಶಯ ಕೋರಿದರು.

ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ ಜನ್ಮ ದಿನವಾದ ಇಂದು ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ. ಆಧುನಿಕ ಭಾರತ ನಿರ್ಮಾಣದಲ್ಲಿ ನೀಡಿದ ಕೊಡುಗೆಗೆ ಅವರನ್ನು ಯಾವತ್ತೂ ನೆನಪಿಸಿಕೊಳ್ಳಬೇಕು ಎಂದು ಉಪ ರಾಷ್ಟ್ರಪತಿ ಅವರು ಟ್ವೀಟ್ ಮಾಡಿದ್ದಾರೆ.

ಉಪ ರಾಷ್ಟ್ರಪತಿ ಅವರು ಇನ್ನೊಂದು ಟ್ವೀಟ್‌ನಲ್ಲಿ ಮಕ್ಕಳು ದೇಶದ ಭವಿಷ್ಯ. ಅವರನ್ನು ಪ್ರೀತಿ, ಕಾಳಜಿಯಿಂದ ಬೆಳಸಬೇಕು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News