×
Ad

ನೀರುಮಾರ್ಗ ಜಂಕ್ಷನ್: ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಉದ್ಘಾಟನೆ

Update: 2020-11-15 12:40 IST

ಮಂಗಳೂರು, ನ.15: ನೀರುಮಾರ್ಗ ಪೇಟೆಯ ಹೃದಯಭಾಗದಲ್ಲಿ ಶಾಸಕರ ವಿಶೇಷ ಶಿಫಾರಸಿನ ಅನುದಾನದಲ್ಲಿ 9 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣದ ಮೇಲ್ಛಾವಣಿಯನ್ನು ಶಾಸಕ ಡಾ.ವೈ ಭರತ್ ಶೆಟ್ಟಿ ರವಿವಾರ ಉದ್ಘಾಟಿಸಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಉಪಾಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್, ಅಕ್ರಮ ಸಕ್ರಮ ಸಮಿತಿಯ ಸದಸ್ಯೆ ಪವಿತ್ರಾ ನೀರುಮಾರ್ಗ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ರಿಕ್ಷಾ ಪಾರ್ಕ್ ಅಧ್ಯಕ್ಷ ಪ್ರವೀಣ್ ನೊರೊನ್ಹ, ಪಂಚಾಯತ್ ಮಾಜಿ ಅಧ್ಯಕ್ಷೆ ಕಸ್ತೂರಿ ನೀರುಮಾರ್ಗ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಚಿನ್ ಹೆಗ್ಡೆ, ಪಂಚಾಯತ್ ಸದಸ್ಯರಾದ ಪುಷ್ಪರಾಜ್ ಮಾಣೂರು, ಚೇತನ್, ಉಷಾ, ಚಂದ್ರಾವತಿ, ಗುಣವತಿ, ಶಶಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News