ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಗ್ರಾ.ಪಂ. ಸದಸ್ಯ: ಆರೋಪ

Update: 2020-11-15 14:32 GMT
ಸಾಂದರ್ಭಿಕ ಚಿತ್ರ

ಮೈಸೂರು, ನ.15: ಬೆಳಕಿನ ಹಬ್ಬ ದೀಪಾವಳಿಯಂದೇ ವ್ಯಕ್ತಿಯೋರ್ವ ತನ್ನ ಹೆಂಡತಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಘಟನೆ ತಿ.ನರಸೀಪುರ ತಾಲೂಕು ದೊಡ್ಡಮುಲಗೂಡು ಗ್ರಾಮದಲ್ಲಿ ನಡೆದಿದೆ.

ದೊಡ್ಡಮುಲಗೂಡು ಗ್ರಾಮದ ಗ್ರಾಪಂ ಸದಸ್ಯ ರಮೇಶ್ (30)ಎಂಬಾತ ತನ್ನ ಪತ್ನಿ ಶಾಂತಮ್ಮ (22) ಎಂಬಾಕೆಯನ್ನು ಕೊಲೆ ಮಾಡಿ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ್ದಾನೆಂಬ ಶಂಕೆ ವ್ಯಕ್ತವಾಗಿದೆ.

ಕೊಲೆ ಸಂಬಂಧ ಬನ್ನೂರು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆ ಬಳಿಕ ರಮೇಶ್ ತಲೆಮರೆಸಿಕೊಂಡಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News