ನಾನು ಸಚಿವನಾಗುವುದು ಖಚಿತ: ಶಾಸಕ ಉಮೇಶ್ ಕತ್ತಿ

Update: 2020-11-15 14:50 GMT

ಬೆಳಗಾವಿ, ನ.15: ಸಚಿವ ಸಂಪುಟ ವಿಸ್ತರಣೆಯಾದರೆ ನಾನು ಖಚಿತವಾಗಿ ಸಚಿವನಾಗುತ್ತೇನೆ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡುವ ಕುರಿತಂತೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಚಿಂತನೆ ನಡೆಸಿದ್ದಾರೆ. ಆದಷ್ಟು ಬೇಗ ಸಚಿವನಾಗುತ್ತೇನೆ ಎಂದರು.

ಬೆಳಗಾವಿ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ದಿ.ಸಂಸದ ಸುರೇಶ್ ಅಂಗಡಿ ಅವರ ಕುಟುಂಬದವರಿಗೆ ಸಿಗಬೇಕು. ಇಲ್ಲವಾದರೆ ಮಾಜಿ ಸಂಸದ ರಮೇಶ್ ಕತ್ತಿ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರ ಕೆಲಸ ಪ್ರತಿಪಕ್ಷ ನಾಯಕನ ಕೆಲಸ. ಅವರು ಆ ಕೆಲಸ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಏಕೆ ಹೇಳಿಕೆ ನೀಡುತ್ತಾರೋ ಗೊತ್ತಿಲ್ಲ ಎಂದ ಅವರು, ಇನ್ನೂ 3 ವರ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿಯೂ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News