ಯುವಕ ಆತ್ಮಹತ್ಯೆ
Update: 2020-11-15 15:25 GMT
ಮಣಿಪಾಲ, ನ.15: ವೈಯಕ್ತಿಕ ಕಾರಣದಿಂದ ಮನನೊಂದ ವಾಹನ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದ ಶೆಟ್ಟಿಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಮೂಡಬಿದ್ರೆ ಮೂಲದ ವಿಶ್ವನಾಥ್(37) ಎಂದು ಗುರುತಿಸ ಲಾಗಿದೆ. ಶೆಟ್ಟಿಬೆಟ್ಟುವಿನಲ್ಲಿ 407 ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಇವರು, ನ.13ರ ಸಂಜೆಯಿಂದ ನ.14ರ ರಾತ್ರಿಯ ಮಧ್ಯಾವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.