ಅತ್ಯಾಚಾರ ಆರೋಪ: ಸಬ್‍ಇನ್‍ಸ್ಪೆಕ್ಟರ್ ಅಮಾನತು

Update: 2021-03-12 12:21 GMT

ಬೆಂಗಳೂರು, ನ.17: ಅತ್ಯಾಚಾರ ಆರೋಪ ಸಂಬಂಧ ದೂರಿನ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆ ಸಬ್‍ಇನ್‍ಸ್ಪೆಕ್ಟರ್(ಪಿಎಸ್ಸೈ) ವಿಶ್ವನಾಥ್ ಬಿರಾದರ್ ಅವರನ್ನು ಅಮಾನತು ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಲ್ಯಾಪ್‍ಟಾಪ್ ಕಳುವಾಗಿರುವ ಸಂಬಂಧ  ದೂರು ನೀಡಲು ಚಾಮರಾಜಪೇಟೆ ಪೊಲೀಸ್ ಠಾಣೆಗೆ ಬಂದಿದ್ದ ಯುವತಿಗೆ ಅಲ್ಲಿ ಪಿಎಸ್ಸೈ ವಿಶ್ವನಾಥ ಬಿರಾದಾರ್ ಪರಿಚಯವಾಗಿ ತದನಂತರ ವಿವಾಹ ಆಗುವುದಾಗಿ ನಂಬಿಸಿ, ವಂಚನೆ ಮಾಡಿರುವುದಾಗಿ ಹೇಳಾಗುತ್ತಿದೆ.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ. 11ರಂದು ಯುವತಿ ಮತ್ತು ಬಿರಾದಾರ್ ಪರಸ್ಪರ ದೂರು ದಾಖಲಿಸಿಕೊಂಡಿದ್ದಾರೆ. ಯುವತಿಯ ದೂರಿನ ಪ್ರಕಾರ, ನ. 9ರಂದು ಯುವತಿಯನ್ನು ಬಿರಾದಾರ್ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಮದುವೆ ಆಗದೇ ಅಲ್ಲಿಂದ ವಾಪಸಾಗಿದ್ದಾರೆ ಎಂಬ ಆರೋಪವಿದೆ.

ಇನ್ನು, ಬಿರಾದಾರ್ ದೂರಿನ ಪ್ರಕಾರ, ಯುವತಿ ಮದುವೆಯಾಗುವಂತೆ ಒತ್ತಾಯಿಸಿದ್ದಳು. ಮದುವೆಗೆ ಒಪ್ಪದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಬೆದರಿಕೆ ಒಡ್ಡಿದ್ದಲ್ಲದೆ, 10 ಲಕ್ಷ ರೂ. ಕೊಡಬೇಕೆಂಬ ಬೇಡಿಕೆಯನ್ನೂ ಇಟ್ಟಿದ್ದಳು. ಒಂದೊಮ್ಮೆ ಹಣ ನೀಡದೇ ಹೋದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾಗಿ ಆರೋಪವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News