ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲೂ 'ಮಹಾಘಟಬಂಧನ್': ದಿನೇಶ್ ಗುಂಡೂರಾವ್

Update: 2020-11-17 14:12 GMT

ಬೆಂಗಳೂರು, ನ.17: ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಮಹಾಘಟಬಂಧನ್ ಮುಂದುವರೆಯಲಿದೆ ಎಂದು ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ನಾವು ಮೈತ್ರಿ ಮಾಡುತ್ತೇವೆ ಮತ್ತು ಮೈತ್ರಿಯನ್ನು ಬಲಪಡಿಸುವಲ್ಲಿ ಕಾಂಗ್ರೆಸ್ ತನ್ನ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಇತರ ಪಕ್ಷಗಳ ಮೈತ್ರಿ ಹೊಂದಾಣಿಕೆಯಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಪಡೆದಿತ್ತು. ಅದೇ ರೀತಿ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News