ಆಲ್-ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಫೋರಂ : ಬಂಟ್ವಾಳ ತಾಲೂಕು ಸಮಿತಿ ರಚನೆ

Update: 2020-11-17 16:21 GMT

ಬಿ.ಸಿ.ರೋಡ್ : ಆಲ್ ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಫೋರಂ ಇದರ ಬಂಟ್ವಾಳ ತಾಲೂಕು ಸಮಿತಿಯ ರಚನಾ ಸಭೆ ರವಿವಾರ ಬಿ.ಸಿ.ರೋಡ್ - ತಲಪಾಡಿಯ ಖಝಾನ ಕಮ್ಯೂನಿಟಿ ಹಾಲ್ ನಲ್ಲಿ ನಡೆಯಿತು.

ಬಂಟ್ವಾಳ ತಾಲ್ಲೂಕು ಎನ್ನಾರ್ಸಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷರಾದ ಎಸ್ ಮಹಮ್ಮದ್ ಶಾಫಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ಫೋರಂ ನ ರಾಜ್ಯ ಕಾರ್ಯಾಧ್ಯಕ್ಷ ಎಸ್. ಅಬೂಬಕ್ಕರ್ ಸಜೀಪ ಹಾಗೂ ರಾಜ್ಯ ಸಲಹಾ ಸಮಿತಿಯ ಪ್ರಧಾನ ಸಲಹೆಗಾರ ರಫೀಕ್ ಮಾಸ್ಟರ್ ಅವರು ಸಂಸ್ಥೆಯ ಧ್ಯೇಯೋದ್ದೇಶಗಳ ಬಗ್ಗೆ  ಮಾಹಿತಿ ನೀಡಿದರು. ಸಂಸ್ಥೆಯ ಜಿಲ್ಲಾಧ್ಯಕ್ಷ ಆಸೀಫ್ ಚೊಕ್ಕಬೆಟ್ಟು, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ, ಬಿ.ಎಂ.ಅಬ್ಬಾಸ್ ಅಲಿ ಬೋಳಂತೂರು, ಯೂತ್ ವಿಂಗ್ ಅಧ್ಯಕ್ಷ ಹಾಶೀರ್ ಪೇರಿಮಾರ್, ಕರಾವಳಿ ವಲಯದ ವೈದ್ಯಕೀಯ ಉಸ್ತುವಾರಿ ಸಿದ್ದಿಕ್ ಕೊಳಕೆ, ಹಾಗೂ ಇನ್ನಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಲ್-ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಫೋರಂ ಇದರ ಬಂಟ್ವಾಳ ತಾಲೂಕು ಸಮಿತಿಯ ನೂತನ  ಅಧ್ಯಕ್ಷರಾಗಿ ಎಂ.ಎಂ ಮಹಮ್ಮದ್ (ಮೋನು) ನಂದಾವರ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಸಲಾಂ, ಅಬೂಬಕ್ಕರ್ ಫರಂಗಿಪೇಟೆ, ಇಬ್ರಾಹಿಂ ಕೈಲಾರ್, ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರು ಬಿ.ಸಿ ರೋಡ್, ಕಾರ್ಯದರ್ಶಿಯಾಗಿ ಹಾರೂನ್ ರಶೀದ್ ಬಂಟ್ವಾಳ, ಕೋಶಾಧಿಕಾರಿಯಾಗಿ  ಅಲ್ತಾಫ್ ಮೇಲ್ಮನೆ ಫರಂಗಿಪೇಟೆ ಆಯ್ಕೆಯಾದರು. ಸಂಘಟನಾ ಕಾರ್ಯದರ್ಶಿ ಗಳಾಗಿ ನವಾಝ್ ಬಡಕಬೈಲ್, ರಮ್ಲಾನ್ ಕಲಾಯಿ, ವೈದ್ಯಕೀಯ ಉಸ್ತುವಾರಿಯಾಗಿ ಇಶಾಕ್ ತುಂಬೆ, ಮುಖ್ತಾರ್ ಅಮ್ಮೆಮಾರ್,  ಐಟಿ ಸೆಲ್ ಉಸ್ತುವಾರಿಯಾಗಿ ಇಶ್ರಾರ್ ಗೂಡಿನಬಳಿ, ನವಾಝ್ ಬಂಟ್ವಾಳ ಅವರನ್ನು ನೇಮಕ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News