ಭಿಕ್ಷೆ ಕೇಳಿದ ಮಾನಸಿಕ ಅಸ್ವಸ್ಥನಿಗೆ ಹಲ್ಲೆ ನಡೆಸಿದ ಅಂಗಡಿ ಮಾಲಕ

Update: 2020-11-18 17:56 GMT

ಪಾಂಡವಪುರ, ನ.18: ಹಸಿವು ನೀಗಿಸಿಕೊಳ್ಳಲು ಭಿಕ್ಷೆ ಕೇಳಿದ ಮಾನಸಿಕ ಅಸ್ವಸ್ಥ ವ್ಯಕ್ತಿಗೆ ಅಂಗಡಿ ಮಾಲಕನೊಬ್ಬ ರಿಪೀಸ್ ಪಟ್ಟಿಯಿಂದ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಪಟ್ಟಣದ ಡಾ.ರಾಜ್‍ಕುಮಾರ್ ವೃತ್ತದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಾನಸಿಕ ಅಸ್ವಸ್ಥ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದ ರಾಜೇಶ್‍ಗೌಡ(38) ಎಂದು ತಿಳಿದು ಬಂದಿದ್ದು, ಸಾರ್ವಜನಿಕರು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮೆಡಿಕಲ್ ಸ್ಟೋರ್ ನಲ್ಲಿ ಮಾನಸಿಕ ಅಸ್ವಸ್ಥ ಭಿಕ್ಷೆ ನೀಡುವಂತೆ ಬೇಡಿಕೊಂಡಿದ್ದು, ಅಂಗಡಿ ಮಾಲಕ ಭಿಕ್ಷೆ ನೀಡಲು ನಿರಾಕರಿಸಿದ್ದಾರೆ. ಆದರೆ, ಮಾನಸಿಕ ಅಸ್ವಸ್ಥ ಭಿಕ್ಷೆಗೆ ಒತ್ತಾಯಿಸಿದ್ದಾನೆ. ಇದರಿಂದ ಕುಪಿತಗೊಂಡ ಮಾಲಕ ಹಲ್ಲೆ ನಡೆಸಿದ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News