ಇಸ್ಪೀಟ್ ಜೂಜಾಟ: ಐವರು ಆರೋಪಿಗಳ ಬಂಧನ
Update: 2020-11-19 04:55 GMT
ಶಿವಮೊಗ್ಗ, ನ.19: ಇಸ್ಪೀಟು ಜೂಜಾಟದಲ್ಲಿ ನಿರತರಾಗಿದ್ದ ಆರೋಪದಲ್ಲಿ ಐದು ಮಂದಿಯನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದು, 31,500 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರಿನಿಂದ ಕೆಂಪೇಗೌಡ ನಗರ ಕಡೆ ಹೋಗುವ ಬೈಪಾಸ್ ರಸ್ತೆಯ ಹತ್ತಿರ ಗುಂಪು ಸೇರಿಕೊಂಡು ಇಸ್ಪೀಟು ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಭದ್ರಾವತಿ ಉಪ ವಿಭಾಗದ ಡಿವೈಎಸ್ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ವೃತ್ತ ನಿರೀಕ್ಷಕ ಮಂಜುನಾಥ್, ಸಿಬ್ಬಂದಿಯಾದ ಬಸವರಾಜ ಸಿಪಿಸಿ, ಮಧು ಸಿಪಿಸಿ, ಮಂಜುನಾಥ್ ಸಿಪಿಸಿ, ರಾಜಣ್ಣ ಎ.ಎಚ್.ಸಿ. ಅವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಆರೋಪಿತರ ವಿರುದ್ಧ ಅಕ್ರಮ ಜೂಜಾಟ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.