ಉಡುಪಿ: ಸುಸಜ್ಜಿತ ಜಿಲ್ಲಾಸ್ಪತ್ರೆ ಕಾಮಗಾರಿ ಶೀಘ್ರದಲ್ಲಿ; ಶಾಸಕ ರಘುಪತಿ ಭಟ್

Update: 2020-11-19 14:14 GMT

ಉಡುಪಿ, ನ.20: ಅತ್ಯಾಧುನಿಕವಾದ ಸುಸಜ್ಜಿತ, ಎಲ್ಲಾ ಅಗತ್ಯ ಮೂಲ ಭೂತ ಸೌಲ್ಯವನ್ನೊಳಗೊಂಡ ಜಿಲ್ಲಾಸ್ಪತ್ರೆಯ ಕಟ್ಟಡವನ್ನು ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜ್‌ಗೆ ಪೂರಕವಾಗಿರುವಂತೆ ನಿರ್ಮಿಸಬೇಕುಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾಸ್ಪತ್ರೆ ನಿರ್ಮಾಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಜನಸಾಮಾನ್ಯರು ಅತೀಸುಲಭವಾಗಿ ಆರೋಗ್ಯ ಸೇವೆಯನ್ನು ಪಡೆಯುವ ರೀತಿಯಲ್ಲಿ ಕಟ್ಟಡದ ನೀಲನಕ್ಷೆಯನ್ನು ತಯಾರಿಸಬೇಕು. ತುರ್ತು ಚಿಕಿತ್ಸಾ ಘಟಕ, ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಶಾಲೆ, ಡಯಾಲಿಸಿಸ್ ಕೇಂದ್ರ, ಐಸಿಯು ಕೇಂದ್ರಗಳು ನೆಲ ಮಹಡಿಯಲ್ಲೇ ನಿರ್ಮಿಸು ವುದರಿಂದ ಚಿಕಿತ್ಸೆಗೆ ಬರುವ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದ್ದು ಇದಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.

250 ಹಾಸಿಗೆ ಸಾಮರ್ಥ್ಯದ ಜಿಲ್ಲಾ ಆಸ್ಪತ್ರೆ ಕಟ್ಟಡ ಹಾಗೂ ಸಿಬ್ಬಂದಿಗಳ ವಸತಿಗೃಹವನ್ನು 115 ಕೋಟಿ ರೂ ವೆಚ್ಚದಲ್ಲಿ 27375 ಚದರ ಮೀ. ವಿಸ್ತೀರ್ಣದಲ್ಲಿ ಕರಾವಳಿ ಭಾಗದ ಹವಾಮಾನಕ್ಕನುಗುಣವಾಗಿ ಸುಸಜ್ಜಿತ ಕಟ್ಟಡ ವನ್ನು ಶೀಘ್ರವೇ ಪ್ರಾರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಜನರ ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರ ವಾಹನಗಳ ನಿಲುಗಡೆಗೆ ಕಟ್ಟಡದ ನೆಲಮಾಳಿಗೆಯಲ್ಲಿ ಅವಕಾಶ ಮಾಡಿಕೊಡುವ ರೀತಿಯಲ್ಲಿ ಕಟ್ಟಡ ನಿರ್ಮಾಣ ಮಾಡಬೇಕು ಎಂದರು.

ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಜಾಗದ ಲ್ಯತೆ ಸೇರಿದಂತೆ ಮತ್ತಿತರ ಪರಿಶೀಲನೆಯನ್ನು ಅಧಿಕಾರಿಗಳು ಹಾಗೂ ಕಟ್ಟಡ ನಿರ್ಮಾಣ ಸಮಾಲೋಚಕರು ಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ನೀಲ ನಕ್ಷೆಯನ್ನು ಸಿದ್ದಪಡಿಸಬೇಕು ಎಂದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ನೂತನ ಕಟ್ಟಡ ನಿರ್ಮಾಣವನ್ನು ಹಾಲಿ ಇರುವ ಹಳೆಯ ಆಸ್ಪತ್ರೆಯ ಕಟ್ಟಡವನ್ನು ಉಳಿಸಿಕೊಂಡು ಆಸ್ಪತ್ರೆಯ ಹಿಂಭಾಗದ ಖಾಲಿ ಜಾಗವನ್ನು ಬಳಿಸಿಕೊಂಡು ಮಾಡುವುದರಿಂದ ಹಾಲಿ ಆಸ್ಪತ್ರೆ ಯಲ್ಲಿರುವ ರೋಗಿಗಳ ಚಿಕಿತ್ಸೆಗೆ ಯಾವುದೇ ರೀತಿಯ ತೊಂದರೆ ಉಂಟಾಗು ವುದಿಲ್ಲ. ಆ ಕಟ್ಟಡವು ಮುಂದಿನ ದಿನಗಳಲ್ಲಿ ಉಪಯೋಗಕ್ಕೆ ಬರುತ್ತದೆ ಎಂದರು.

ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವು ಆಸ್ಪತ್ರೆಯ ಆವರಣದಲ್ಲಿ ಲ್ಯವಿದೆ. ಸಣ್ಣಪುಟ್ಟ ಕಟ್ಟಡಗಳನ್ನು ತೆರವು ಮಾಡುವು ದರಿಂದ ಮತ್ತಷ್ಟು ನಿವೇಶನ ಲ್ಯವಾಗುತ್ತದೆ. ಹೊಸ ಕಟ್ಟಡಕ್ಕೆ ಅಗತ್ಯವಿರುವ ರಸ್ತೆ ಕಾಮಗಾರಿ ಮಾತ್ರ ಹೆಚ್ಚುವರಿಯಾಗಲಿದೆ ಎಂದರು.

ಸಭೆಯಲ್ಲಿ ಜಿಪಂ ಸಿಇಓ ಡಾ.ನವೀನ್ ಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಸರ್ಜನ್ ಡಾ.ಮಧುಸೂಧನ್ ನಾಯಕ್, ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News