ಕಾಸರಗೋಡು : ಬಂಧಿತ ಶಾಸಕ ಕಮರುದ್ದೀನ್ ಆಸ್ಪತ್ರೆಗೆ ದಾಖಲು

Update: 2020-11-20 06:51 GMT

ಕಾಸರಗೋಡು : ಫ್ಯಾಶನ್  ಗೋಲ್ಡ್ ಜುವೆಲ್ಲರಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ನ್ಯಾಯಾಂಗ ಬಂಧನದಲ್ಲಿರುವ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಶಾಸಕನನ್ನು ಆಂಜಿಯೋಗ್ರಾಂ ತಪಾಸಣೆಗೆ ಒಳಪಡಿಸಲಾಗಿದೆ.   ಹೃದ್ರೋಗ ವಲಯದ ತುರ್ತು ಘಟಕದಲ್ಲಿ ಶಾಸಕ ಚಿಕಿತ್ಸೆ ಪಡೆಯುತ್ತಿದ್ದು , ಆಂಜಿಯೋಗ್ರಾಂ ತಪಾಸಣಾ ವರದಿ ಬಂದ ಬಳಿಕ ಶಸ್ತ್ರಕ್ರಿಯೆ ನಡೆಸುವ ಹಾಗೂ ಮುಂದಿನ ಚಿಕಿತ್ಸೆ ಕುರಿತು ತೀರ್ಮಾನ ತೆಗೆದುಕೊಳ್ಳಲಾ ಗುವುದು ಎಂದು  ಆಸ್ಪತ್ರೆ ಮುಖ್ಯಸ್ಥರು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಜೈಲಿ ನಲ್ಲಿ ಅನಾರೋಗ್ಯ  ಸಮಸ್ಯೆ ಕಂಡು ಬಂದ ಹಿನ್ನಲೆಯಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ತಪಾಸಣೆ ಸಂದರ್ಭದಲ್ಲಿ  ಆರೋಗ್ಯ  ಸಮಸ್ಯೆ ಇರುವುದಾಗಿ ವೈದ್ಯರು  ತಿಳಿಸಿದ್ದು, ಬಳಿಕ ಕಣ್ಣೂರು ಸರಕಾರಿ ಆಸ್ಪತ್ರೆಗೆ  ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News