ಉದ್ಯಾವರ: ನ.22ರಂದು ವೀಡಿಯೊ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
Update: 2020-11-20 13:28 GMT
ಉದ್ಯಾವರ, ನ.20: ಸ್ಥಳೀಯ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ನೆಹರೂ ಬಗ್ಗೆ ಏರ್ಪಡಿಸಿದ್ದ ವಿಡಿಯೋ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನ.22ರ ರವಿವಾರ ಬೆಳಗ್ಗೆ 9:30ಕ್ಕೆ ಮಸೀದಿ ಬಳಿಯ ಸಂಸ್ಥೆಯ ಕಾರ್ಯಾಲಯದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಉಪನ್ಯಾಸಕ ಡಾ.ಪ್ರಸಾದ್ ರಾವ್ ಎಂ. ಮತ್ತು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್ ಕುಗ್ವೆ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ರಿಯಾಝ್ ಪಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.