ಬೈಂದೂರು, ಪಡುವರಿ ಕಟ್ಟಡ ಕಾರ್ಮಿಕರ ಸಮಾವೇಶ

Update: 2020-11-20 14:56 GMT

ಬೈಂದೂರು, ನ.20: ಈ ತಿಂಗಳ 26ರಂದು ಜರಗುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಬೈಂದೂರಿನಲ್ಲಿ ರೈತ, ಕೃಷಿಕೂಲಿ, ಕಾರ್ಮಿಕರ ಬೃಹತ್ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಯಶಸ್ವಿಗೊಳಿಸಬೇಕು ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಗಣೇಶ ದೇವಾಡಿಗ ತೊಂಡೆಮಕ್ಕಿ ಹೇಳಿದ್ದಾರೆ.

ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಆಯೋಜಿಸಲಾದ ಬೈಂದೂರು, ಪಡುವರಿ ಗ್ರಾಮಗಳ ಕಟ್ಟಡ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಿಐಟಿಯು ಬೈಂದೂರು ತಾಲೂಕು ಸಂಚಾಲಕ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಮಾತನಾಡಿ, ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೈಜ ಕಟ್ಟಡ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ಹಣಕಾಸಿನ ನೆರವು ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಕಾರ್ಮಿಕ ಮುಖಂಡರಾದ ವೆಂಕಟೇಶ್ ಕೋಣಿ, ರಾಮ ಪೂಜಾರಿ ಯಡ್ತರೆ, ಮಂಜು ಪಡುವರಿ, ಲಕ್ಷ್ಮಣ ಯಡ್ತರೆ, ನಾಗರತ್ನ ಪಡುವರಿ ಮೊದಲಾ ದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News