ಚಂದಾ ಕೊಚ್ಚಾರ್ ವಿರುದ್ಧ ಬಲವಂತದ ಕ್ರಮ ಇಲ್ಲ: ಈ.ಡಿ.

Update: 2020-11-20 17:18 GMT

ಮುಂಬೈ, ನ. 20: ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಂದಾ ಕೊಚ್ಚಾರ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ತನ್ನ ಬಂಧಿತ ಪತಿ ದೀಪಕ್ ಕೊಚ್ಚಾರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಚಂದಾ ಕೊಚ್ಚಾರ್ ಮನವಿ ಸಲ್ಲಿಸಿದ ಬಳಿಕ ಜಾರಿ ನಿರ್ದೇಶನಾಲಯ ಈ ಭರವಸೆ ನೀಡಿದೆ. ತನ್ನ ಪತಿಯನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಚಂದಾ ಕೊಚ್ಚಾರ್ ಅವರು ಅರ್ಜಿಯಲ್ಲಿ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News